ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡನ ಕಿಡ್ನ್ಯಾಪ್ ಹಾಗೂ ಹಲ್ಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಲ್ಲಿರುವ ನಟ ದುನಿಯಾ ವಿಜಯ್ಗೆ ಜಾಮೀನು ನೀಡಲು ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿದೆ. ಈ ಮೂಲಕ ವಿಜಯ್ ಇನ್ನಷ್ಟು ದಿನ ಪರಪ್ಪನ ಅಗ್ರಹಾರದಲ್ಲೇ ಇರಬೇಕಾಗಿದೆ. ಜಾಮೀನು ಕೋರಿ ದುನಿಯಾ ವಿಜಯ್ ಪರ ವಕೀಲರು 8ನೇ ಎಸಿಎಂಎಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು. ಆದರೆ ಇಂದು ಕೂಡ ವಿಜಯ್ ಗೆ ಬೇಲ್ ಸಿಕ್ಕಿಲ್ಲ. ಪ್ರಕರಣದಲ್ಲಿ A2 ದುನಿಯಾ ವಿಜಯ್, A1 ಪ್ರಸಾದ್ ಹಾಗೂ A3 ಮಣಿ ಜೈಲಿನಲ್ಲಿದ್ದಾರೆ.

Comments
Post a Comment